ಭೂಕಂಪದಿಂದ ಒಂದು ಸಾವಿರ ಜನರ ಸಾವು ಮ್ಯಾನ್ಮಾರ್  ನೆರವರಿಗೆ ಮುಂದಾದ ಭಾರತ ಸರಕಾರ ಆಪರೇಷನ್ ಬ್ರಹ್ಮ ಆರಂಭ

33

” ಭೂಕಂಪನದಿಂದ ತತ್ತರಿಸಿರುವ ಮ್ಯಾನ್ಮಾರ್ ನಲ್ಲಿ ಮೃತರ ಸಂಖ್ಯೆ 1,000 ದಾಟುತ್ತಿದ್ದಂತೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಭಾರತ

ಶನಿವಾರ ಸಂಜೆ ಆಪರೇಷನ್‌ ಬ್ರಹ್ಮದಡಿ ಎರಡು ನೌಕಾ ಹಡಗುಗಳನ್ನು ಕಳುಹಿಸಿದ್ದು, ಏರ್ ಲಿಫ್ಟ್ ಮಾಡಲು ಫೀಲ್ಡ್ ಆಸ್ಪತ್ರೆ ವ್ಯವಸ್ಥೆ ಮಾಡಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಹದಿನೈದು ಟನ್‌ ಪರಿಹಾರ ಸಾಮಗ್ರಿಗಳನ್ನು ಹೊತ್ತು ಭಾರತದ ವಾಯುಪಡೆಯ ಸಿ-130 ಜೆ ವಿಮಾನವು ಮ್ಯಾನ್ಮಾರ್‌ನ ಯಾಂಗಾನ್‌ ನಗರವನ್ನು ತಲುಪಿದೆ.


ಟೆಂಟ್‌ಗಳು, ಬ್ಲಾಂಕೆಟ್‌ಗಳು, ಸ್ಲೀಪಿಂಗ್‌ ಬ್ಯಾಗ್‌ಗಳು, ಫುಡ್‌ ಪ್ಯಾಕೆಟ್‌ಗಳು, ಹೈಜೀನ್‌ ಕಿಟ್‌ಗಳು, ಜೆನೆರೇಟರ್‌ಗಳು ಹಾಗೂ ಅತ್ಯಗತ್ಯ ಔಷಧಿಗಳನ್ನು ಕಳುಹಿಸಲಾಗಿದೆ.

ಈಗಾಗಲೇ ಹದಿನೈದು ಟನ್ ಪರಿಹಾರ ಸಾಮಗ್ರಿಗಳನ್ನು ಮ್ಯಾನ್ಮಾರ್‌ಗೆ ತಲುಪಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದೆ.

118 ಸದಸ್ಯರ ಭಾರತೀಯ ಸೇನೆಯ ಫೀಲ್ಡ್ ಆಸ್ಪತ್ರೆಯ ಘಟಕ ಆಗ್ರಾದಿಂದ ಮಾಂಡಲೆಗೆ ತೆರಳುತ್ತಿದೆ. ಮ್ಯಾನ್ಮಾರ್ ಜನರಿಗೆ ಪ್ರಥಮ ಚಿಕಿತ್ಸೆ ಮತ್ತು ತುರ್ತು ವೈದ್ಯಕೀಯ ಸೇವೆಗಳನ್ನು ಒದಗಿಸಲು ತಂಡವು ಸಹಾಯ ಮಾಡುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಮಾಜಿ ಪ್ರಧಾನಮಂತ್ರಿ ಖಾಲೇದಾ ಜಿಯಾ ಪುತ್ರ ತಾರಿಕ್ ರೆಹಮಾನ್ ನೇತೃತ್ವದ ಬಿಎನ್ ಪಿ ಪಕ್ಷ ಕ್ಕೆ ಬಹುಮತ ಪ್ರಧಾನಿ ಮೋದಿ ಅಭಿನಂದನೆ

ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಐತಿಹಾಸಿಕ ಗೆಲುವು ಸಾಧಿಸಿದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯನ್ನು...

ಬಲೂಚಿಸ್ತಾನದಲ್ಲಿ ಅಶಾಂತಿ ಪ್ರಯತ್ನಗಳಲ್ಲಿ ಭಾರತ ಭಾಗಿ ಎಂಬ ಪಾಕಿಸ್ತಾನದ ಆರೋಪ ಸ್ಪಷ್ಟವಾಗಿ ತಿರಸ್ಕರಿಸಿದ ಭಾರತ

ಬಲೂಚಿಸ್ತಾನದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನಗಳಲ್ಲಿ ಭಾರತದ ಭಾಗಿಯಾಗಿದೆ ಎಂಬ ಪಾಕಿಸ್ತಾನದ ಆರೋಪಗಳನ್ನು ಭಾರತ ಸ್ಪಷ್ಟವಾಗಿ ತಿರಸ್ಕರಿಸಿದೆ....

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂದುಗಳ ವಿರುದ್ಧ ದೌರ್ಜನ್ಯ ಹಿಂದು ಯುವಕನ ಕೊಲೆ

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಹಿಂದುಗಳ ಕೊಲೆ ನಡೆಯುತ್ತಿದೆ. ನಿನ್ನೆಯೂ ಸಹ ಹಿಂದೂ ಯುವಕನನ್ನು ಕೊಲ್ಲಲಾಗಿದೆ. ಶುಕ್ರವಾರ...

ಅಮೇರಿಕಾ ನಾಯಕರ ಹತ್ಯೆಗೆ ಸಂಚು ರೂಪಿಸಿದರೆ ಇರಾನ್ ‘ಈ ಭೂಮಿ ಮೇಲಿಂದ ನಾಶವಾಗುತ್ತದೆ’: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಇರಾನ್ ಅಮೆರಿಕದ ನಾಯಕನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾದರೆ, ಇರಾನ್ ನ್ನು ಈ ಭೂಮಿಯಿಂದಲೇ ಅಳಿಸಿಹಾಕಲಾಗುವುದು...