ಮುಡಾ ಆಯುಕ್ತರ ಕರ್ತವ್ಯಕ್ಕೆ ಅಡ್ಡಿ, ಬೆದರಿಕೆ ಬ್ರೋಕರ್ ಗಳ ವಿರುದ್ಧ ಪ್ರಕರಣ ದಾಖಲು

37

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ(ಮೂಡಾ) ಉರ್ವಾ ಕಚೇರಿಯಲ್ಲಿ ಬ್ರೋಕರ್ ಗಳ ಆಟಾಟೋಪ ಮಿತಿಮೀರಿದ್ದು ಮುಡಾ ಆಯುಕ್ತರಿಗೇ ಬೆದರಿಕೆ ಹಾಕಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಇದರಿಂದ ನೊಂದ ಮುಡಾ ಕಮಿಷನರ್ ನೂರ್ ಝಹರಾ ಖಾನಂ ಅವರು ಇಬ್ಬರು ಬ್ರೋಕರ್ ಗಳ ವಿರುದ್ಧ ಉರ್ವಾ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.

ಕಳೆದ ಜನವರಿ 7ರಂದು ಮುಡಾ ಕಚೇರಿ ಒಳಕ್ಕೆ ನುಗ್ಗಿದ್ದ ಬ್ರೋಕರ್ ವ್ಯಕ್ತಿಯೊಬ್ಬ ಸಿಬಂದಿ ಇಲ್ಲದ ಸಂದರ್ಭದಲ್ಲಿ ಕಚೇರಿ ದಾಖಲೆಗಳನ್ನು ಪರಿಶೀಲಿಸಿ ಫೋಟೊ ನಕಲು ಮಾಡಿದ್ದ ಘಟನೆ ನಡೆದಿತ್ತು.

ಇದರ ಸಿಸಿಟಿವಿ ವಿಡಿಯೋ ಹೊರ ಬಂದಿದ್ದರಿಂದ ಮುಡಾ ಕಚೇರಿಯ ಬ್ರೋಕರ್ ವ್ಯವಹಾರ ಜಗಜ್ಜಾಹೀರಾಗಿತ್ತು. ಆನಂತರ ಮೂಡಾ ಕಮಿಷನರ್ ನೂರ್ ಝಹರಾ ಅವರು, ಸಿಬಂದಿ ಹೊರತುಪಡಿಸಿ ಇತರ ಯಾರು ಕೂಡ ಕಚೇರಿ ಒಳ ಬರುವಂತಿಲ್ಲ ಎಂದು ನಿರ್ಬಂಧ ವಿಧಿಸಿದ್ದರು. ಇದರಿಂದ ಕಸಿವಿಸಿಗೊಳಗಾದ ಬ್ರೋಕರ್ ಗಳು,

ಮುಡಾ ಕಮಿಷನರ್ ವಿರುದ್ಧ ಇತರ ಬ್ರೋಕರುಗಳನ್ನು ಒಟ್ಟುಗೂಡಿಸಿ ವಾಟ್ಸಪ್ ಗ್ರೂಪ್ ರಚಿಸಿ ಮಹಿಳಾ ಕಮಿಷನರ್ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದಾರೆ. ಅಧಿಕಾರಿ ಬಗ್ಗೆ ಅವಮಾನಕರ ಸಂದೇಶಗಳನ್ನು ಪೋಸ್ಟ್ ಮಾಡುವುದು, ಗುಂಪು ಕೂಡಿಕೊಂಡು ಕಚೇರಿ ಒಳಗೆ ಬಂದು ಕರ್ತವ್ಯಕ್ಕೆ ಅಡ್ಡಿಪಡಿಸುವುದು,

ಫೋನ್ ಮೂಲಕ ಜೀವ ಬೆದರಿಕೆ ಒಡ್ಡುವುದಲ್ಲದೆ, ಸಾರ್ವಜನಿಕರ ಮುಂದೆ ಕಮಿಷನರ್ ಅವರನ್ನು ಅವಮಾನಿಸುವುದು, ಜನರನ್ನು ಸೇರಿಸಿ ಶಾಂತಿ ಕದಡಲು ಯತ್ನಿಸುವುದು, ಮಾಟಮಂತ್ರ ಬೆದರಿಕೆ ಒಡ್ಡುವ ಕೆಲಸ ಮಾಡಿದ್ದಾರೆಂದು ಮುಡಾ ಕಮಿಷನರ್ ನೂರ್ ಝಹರಾ ದೂರಿನಲ್ಲಿ ತಿಳಿಸಿದ್ದಾರೆ.

ದೂರು ಹಿನ್ನೆಲೆಯಲ್ಲಿ ಉರ್ವಾ ಪೊಲೀಸರು ಆರೋಪಿಗಳ ವಿರುದ್ಧ ಬಿಎನ್‌ಎಸ್ ಕಾಯ್ದೆಯ ಸೆಕ್ಷನ್ 132, 351, 356(1), 61(2) ಮತ್ತು 352 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...