ಬ್ರಹ್ಮಾವರ ಅಪಘಾತದಲ್ಲಿ ಮೃತಪಟ್ಟವಿದ್ಯಾರ್ಥಿ ವಂಶಿ ಜಿ ಶೆಟ್ಟಿ ಪೋಷಕರಿಗೆ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ ಪತ್ರ ನೀಡಿದ ಸರ್ವ ಕಾಲೇಜು ವಿದ್ಯಾರ್ಥಿಶಕ್ತಿ ನಿಯೋಗ

53

ಬ್ರಹ್ಮಾವರ NH-66 ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತದಲ್ಲಿ ಸಾವನಪ್ಪಿದ ವಂಶಿ ಜಿ. ಶೆಟ್ಟಿ ವಿದ್ಯಾರ್ಥಿ ಮನೆಯವರಿಗೆ ಸಂಬಂದ ಪಟ್ಟ ಇಲಾಖೆಯಿಂದ ಪರಿಹಾರ ಒದಗಿಸುವುದು ಮತ್ತು ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೈಓವರ್ ನಿರ್ಮಾಣ ಮಾಡುವ ಕುರಿತುಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ನಿಯೋಗ ದಿಂದ ಜಿಲ್ಲಾಧಿಕಾರಿ ಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತುಉಡುಪಿ ಜಿಲ್ಲೆಯ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರ್ವಜನಿಕರು ರಸ್ತೆದಾಟಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು ಬಹಳಷ್ಟು ಅಪಘಾತಗಳು ಸಂಭವಿಸುತ್ತಿದ್ದು ಈ ಬಗ್ಗೆ ಈಗಾಗಲೇ ಪೈಓವರ್ ನಿರ್ಮಿಸುವಂತೆ ಪ್ರತಿಭಟನೆ ಹಾಗೂ ಮನವಿಯನ್ನು ಸಲ್ಲಿಸಿರುತ್ತೇವೆ.ಈ ವಿಚಾರವಾಗಿ ಯಾರೂ ಕೂಡ ಗಮನ ಹರಿಸದಿದ್ದದ್ದು ಬೇಸರದ ಸಂಗತಿಯಾಗಿದೆ. ಈ ಭಾಗದಲ್ಲಿ ದಿನೇ ದಿನೇ ಅಪಘಾತಗಳು ಜಾಸ್ತಿಯಾಗುತ್ತಿದ್ದು ದಿನಾಂಕ: 01-04-2025ರಂದು ಬೆಳಿಗ್ಗೆ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಾಲೆಗೆ ಹೋಗುವ ಸಂದರ್ಭದಲ್ಲಿ ರಸ್ತೆದಾಟುವಾಗ ಬ್ರಹ್ಮಾವರ ಎಸ್.ಎಂ.ಎಸ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ವಂಶಿ ಜಿ. ಶೆಟ್ಟಿಎಂಬ ಬಾಲಕನು ಅಪಘಾತದಲ್ಲಿ ಸಾವನ್ನಪ್ಪಿದ್ದು, ಈ ಬಾಲಕನ ಕುಟುಂಬದವರಿಗೆ ಯಾವುದೇ ಪರಿಹಾರ ನೀಡದಿರುವುದರಿಂದ ಈ ಕೂಡಲೇ ಜಿಲ್ಲಾಡಳಿತ ಮತ್ತು ಸಂಬಂಧ ಪಟ್ಟ ಇಲಾಖೆಯಿಂದ ಪರಿಹಾರ ಒದಗಿಸಿ ಕೊಡುವಂತೆ ಹಾಗೂ ಆಭಾಗದಲ್ಲಿ ಪೈಓವರ್ ನಿರ್ಮಿಸುವಂತೆ ತಮ್ಮಲ್ಲಿ ಮನವಿ ಮಾಡಲಾಯಿತುಈ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳಾದ ಡಾ ವಿದ್ಯಾ ಕುಮಾರಿ ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ಮಾಡಿ ಪೋಷಕರಿಗೆ ಧೈರ್ಯ ತುಂಬ ಕೆಲಸವನ್ನು ಮಾಡಿದ್ದೇನೆನೀವು ನೀಡಿದ ಮನವಿಯನ್ನು ಪರಿಶೀಲನೆ ಮಾಡಿ ಪರಿಹಾರ ಹಾಗೂ ಫ್ಲೈ ಓವರ್ ಬಗ್ಗೆ ಸಭೆ ಕರೆದು ಕೂಡಲೇ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರುಈ ಸಂದರ್ಭದಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಸಂಘಟನೆಯ ಸಂಸ್ಥಾಪಕರಾದ ಶಿವಕುಮಾರ್ ಕರ್ಜೆ ರಾಜ್ಯಾಧ್ಯಕ್ಷರಾದ ರಚನ್ ಸಾಲಿಯಾನ್, ಪ್ರಮುಖರಾದ ವಿದಿತ್ ನಾಗರಾಜ್. ಮನಿಷ್ ಪೂಜಾರಿ, ವಂಶಿತ್ ಶೆಟ್ಟಿ, ಕಿರಣ್ ಶೆಟ್ಟಿ, ಧನುಷ್ ಆಚಾರ್ಯ, ಸೌರವ್ ಪೂಜಾರಿ ಸಂತೋಷ್ ಪಡುಬಿದ್ರಿ , ಉಪಸ್ಥಿತರಿದ್ದರು

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...