ಕಾಂಗ್ರೆಸ್ ಸಿದ್ಧಾಂತದ ಪರವಾಗಿ ಆಕ್ರಮಣಕಾರಿಯಾಗಿ ಧ್ವನಿ ಎತ್ತುವ ಉತ್ತಮ ವಾಗ್ಮಿಗಳನ್ನು ಎಂಎಲ್‌ಸಿಗಳಾಗಿ ನಾಮನಿರ್ದೇಶನ ಡಿ.ಕೆ. ಶಿವಕುಮಾರ್

37

“ವಿಧಾನ ಪರಿಷತ್ತಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ ಮಾಡುವ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ. ಖಾಲಿ ಇರುವ ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಪಕ್ಷ ಇನ್ನೂ ಯಾವುದೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್  ಹೇಳಿದ್ದಾರೆ.

ಪ್ರಸ್ತುತ ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡುವಲ್ಲಿನ ವಿಳಂಬವು ಕಾಂಗ್ರೆಸ್ ಸರ್ಕಾರದ ಕಾರ್ಯತಂತ್ರದ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. “ಪರಿಷತ್ ಅಭ್ಯರ್ಥಿಗಳ ಆಯ್ಕೆ ಕುರಿತು ಈಗಾಗಲೇ ಎರಡು ಸುತ್ತಿನ ಚರ್ಚೆಗಳು ನಡೆದಿವೆ.

ಹೆಚ್ಚಿನ ಚರ್ಚೆಯ ಅಗತ್ಯವಿದೆ” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರೂ ಆಗಿರುವ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಸಿದ್ಧಾಂತದ ಪರವಾಗಿ ಆಕ್ರಮಣಕಾರಿಯಾಗಿ ಧ್ವನಿ ಎತ್ತುವ ಉತ್ತಮ ವಾಗ್ಮಿಗಳನ್ನು ಎಂಎಲ್‌ಸಿಗಳಾಗಿ ನಾಮನಿರ್ದೇಶನ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಸುಳಿವು ನೀಡಿದ್ದಾರೆ

ಆಕಾಂಕ್ಷಿಗಳ ಪಟ್ಟಿ ಹೈಕಮಾಂಡ್ ಗೆ ತಲುಪಿದೆ. ಮೇಲ್ಮನೆಯಲ್ಲಿ ಬಿಜೆಪಿ ಉತ್ತಮ ವಾಗ್ಮಿಗಳನ್ನು ಹೊಂದಿರುವುದರಿಂದ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಎದುರಿಸಲು ಬಯಸುತ್ತದೆ ಎಂದರು.

ದೆಹಲಿಯಲ್ಲಿರುವ ರಾಷ್ಟ್ರೀಯ ನಾಯಕರು ಅಂತಿಮ ಆಯ್ಕೆ ಬಗ್ಗೆ ರಾಜ್ಯ ಘಟಕಕ್ಕೆ ತಿಳಿಸುವ ಮೊದಲು ವಿವರವಾಗಿ ಚರ್ಚಿಸುತ್ತಾರೆ ಎಂದು ಅವರು ಹೇಳಿದರು.

ಕೆಪಿಸಿಸಿ ನಾಯಕತ್ವ ಬದಲಾವಣೆಯ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ಪಕ್ಷ ಹೇಳಿದಂತೆ ನಾನು ನಡೆಯುತ್ತೇನೆ ಎಂದು ಮಾರ್ಮಿಕವಾಗಿ ಉತ್ತರಿಸಿದರು.

ಕಳೆದ ಐದು ವರ್ಷಗಳಲ್ಲಿ ನಾನು ಬಹಳಷ್ಟು ಕೆಲಸ ಮಾಡಿದ್ದೇನೆಪಕ್ಷಕ್ಕೆ ಯಾವುದು ಒಳ್ಳೆಯದೋ ಅದು ಆಗಲಿ. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದರು.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...