thekarnatakatoday.com
News

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 500 ಕೋಟಿ ಕಿಕ್ ಬ್ಯಾಕ್ ಆರೋಪ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ  ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ

“ಮುಡಾ ಹಗರಣದ ತನಿಖೆ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ  ವಿರುದ್ಧ ಈಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಗಣಿ ಗುತ್ತಿಗೆ ನವೀಕರಣ ವಿಷಯದಲ್ಲಿ ಸಿಎಂ 500 ಕೋಟಿ ರೂ. ಕಿಕ್‌ಬ್ಯಾಕ್  ಪಡೆದಿದ್ದಾರೆ ಎಂಬುದು ಈಗ ಕೇಳಿಬಂದಿರುವ ಆರೋಪವಾಗಿದೆ

. ಸಿಎಂ ಕಿಕ್ ಬ್ಯಾಕ್ ಪಡೆದಿರುವ ಆರೋಪದ ಬಗ್ಗೆ ತನಿಖೆ ನಡೆಸಲು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ

. ಇದು ಸಿಎಂ ಸಿದ್ದರಾಮಯ್ಯ ಹಿಂದಿನ ಅವಧಿಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಆರೋಪವಾಗಿದೆ. 2015ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಸಿದ್ದರಾಮಯ್ಯ 8 ಗಣಿ ಗುತ್ತಿಗೆ ನವೀಕರಣ ಮಾಡಿದ್ದರು.

ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪೆನಿಗಳ ಲೈಸೆನ್ಸ್ ಕೂಡ ನವೀಕರಣ ಮಾಡಲಾಗಿತ್ತು. ಲೈಸೆನ್ಸ್ ನವೀಕರಣ ಮಾಡಿಕೊಟ್ಟಿದ್ದಕ್ಕೆ ಸಿದ್ದರಾಮಯ್ಯ ಸುಮಾರು 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ರಾಮಮೂರ್ತಿ ಗೌಡ ಆರೋಪಿಸಿದ್ದಾರೆ.

ಘೋಷಣೆ ಸಿಎಂ ಸಿದ್ದರಾಮಯ್ಯ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ 5000 ಕೋಟಿ ನಷ್ಟ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಸೆಕ್ಷನ್ 7, 9, 11, 12 ಮತ್ತು 15 ಅಡಿ ಪ್ರಾಸಿಕ್ಯೂಚನ್ಗೆ ಅನುಮತಿ ಕೊಡಿ ಎಂದು ಮನವಿ ಮಾಡಲಾಗಿದೆ.

ದೂರುದಾರರ ಜೊತೆ ರಾಜ್ಯಪಾಲರು ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಆ ನಂತರ ದೂರಿನ ಮೇಲೆ ಸಹಿ ಮಾಡಿ ಕಾನೂನು ವಿಭಾಗದ ಅಭಿಪ್ರಾಯಕ್ಕೆ ಕಳುಹಿಸಿದ್ದಾರೆ

Related posts

ರಾಮಮಂದಿರದಂತೆ ಹೊಸದಾಗಿ ಮಂದಿರ ಮಸೀದಿ ವಿವಾದ ಹುಟ್ಟು ಹಾಕಬೇಡಿ:: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್

The Karnataka Today

ಮುಡಾ ಹಗರಣ ಸುಳ್ಳು ಮಾಹಿತಿಆರೋಪ ಸಿದ್ದರಾಮಯ್ಯ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ ಐ ಆರ್

The Karnataka Today

ಉಡುಪಿ ಜಿಲ್ಲಾ ಗಣಿ ಅಧಿಕಾರಿಗಳ ವಿರುದ್ಧ ವ್ಯಾಪಕ ಆಕ್ರೋಶ ಅಕ್ರಮಗಳ ವಿರುದ್ಧ ದೂರು ನೀಡಿದರೆ ದಂಡ ಕಟ್ಟಿಸಿ  ಕಣ್ಣೋರೆಸುವ ತಂತ್ರ  ಮಾಡುತ್ತಿರುವ ಗಣಿ ಭೂ ವಿಜ್ಞಾನ ಅಧಿಕಾರಿಗಳು

The Karnataka Today

Leave a Comment