ಕುಕ್ಕೆ ಸುಬ್ರಮಣ್ಯಕ್ಕೆ ಬೆಂಗಳೂರಿನಿಂದ ಏಪ್ರಿಲ್ 12 ರಿಂದ ರೈಲು ಸೇವೆ ಆರಂಭ ಕೇಂದ್ರ ರೈಲ್ವೆ ಸಚಿವ ವಿ ಸೋಮಣ್ಣ

41

“ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಬುಧವಾರ ಘೋಷಣೆ ಮಾಡಿದರು.

ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ರೈಲ್ವೆ ಇಲಾಖೆಯ ಯೋಜನೆಗಳಿಗೆ ಸಂಬಂಧಿಸಿ ಮಹತ್ವದ ಮಾಹಿತಿ ಹಂಚಿಕೊಂಡರು. ಇದೆ 12 ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ.

ದಿನಕ್ಕೆ ನಾಲ್ಕು ಬಾರಿ ಹೋಗಿ ಬರುವಂತಹ ಕೆಲಸ ಆಗಲಿದೆ ಎಂದು ಅವರು ಹೇಳಿದರು. 23 ಕಾಮಗಾರಿಗಳ ಪೈಕಿ ಈಗಾಗಲೇ 10 ಕಾಮಗಾರಿಗೆ ಚಾಲನೆ ಕೊಡಲಾಗಿದೆ. ಹಂತ ಹಂತವಾಗಿ ಕೆಲಸಗಳನ್ನು ಪ್ರಾರಂಭ ಮಾಡಲಾಗುತ್ತದೆ.

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಬಂದ ಮೇಲೆ ರೈಲ್ವೆ ಇಲಾಖೆಗೆ ಒಂದು ಕಾಯಕಲ್ಪ ಕೊಟ್ಟಿದ್ದಾರೆ ಎಂದು ಹೇಳಿದರು. ಕರ್ನಾಟಕದಲ್ಲಿ ಇದ್ದತಂಹ 33 ಸಾವಿರ ಕೋಟಿ ರೂ. ವೆಚ್ಚದ ಯೋಜನೆಗಳನ್ನ ನಾವು (ಕೇಂದ್ರ ಸರ್ಕಾರ) ಕೈಗೆತ್ತಿಕೊಂಡಿದ್ದೇವೆ. ಇದೇ 11 ರಂದು ಹಾವೇರಿಯಿಂದ ಬೆಂಗಳೂರಿಗೆ ವಂದೇ ಭಾರತ್ ರೈಲಿಗೆ ಚಾಲನೆ ಕೊಡುತ್ತಿದ್ದೇವೆ

. ಮುಂದಿನ 15 ದಿನಗಳಲ್ಲಿ ಗದಗ, ವಾಡಿ, ಕುಷ್ಠಗಿ, ಯಲಬುರ್ಗಾ ರೈಲು ಸಂಚಾರ ಲೋಕಾರ್ಪಣೆ ಮಾಡುತ್ತೇವೆ. ಅನೇಕ ರೈಲ್ವೆ ಯೋಜನೆಗಳನ್ನು ಲೋಕಾರ್ಪಣೆ ಮಾಡುವಂತಹ ಕೆಲಸ ಈಗಾಗಲೇ ಆಗಿದೆ ಎಂದು ಸೋಮಣ್ಣ ಹೇಳಿದರು.

ಬಟವಾಡಿ ಗೇಟ್ನಲ್ಲಿ ಇವತ್ತು 27 ಕೋಟಿ ರೂ. ವೆಚ್ಚದಲ್ಲಿ ಕೆಲಸ ಆರಂಭ ಮಾಡಲಾಗಿದೆ. ಬಡ್ಡಿಹಳ್ಳಿ ಬಳಿ 43 ಕೋಟಿ ರೂ. ವೆಚ್ಚದಲ್ಲಿ, ಮೈದಾಳದ ಬಳಿ 51 ಕೋಟಿ ರೂ. ವೆಚ್ಚದಲ್ಲಿ ಮೇಲ್ಸತುವೆ ಮಾಡಲಾಗುತ್ತಿದೆ.

650 ಕೋಟಿ ರೂ. ವೆಚ್ಚದ 22 ಮೇಲ್ಸತುವೆ ಮತ್ತು ಕೆಳಸೇತುವೆ ಕಾಮಗಾರಿ ಪ್ರಾರಂಭ ಮಾಡಲಾಗುತ್ತಿದೆ. 23 ಕಾಮಗಾರಿಗಳ ಪೈಕಿ ಈಗಾಗಲೇ 10 ಕಾಮಗಾರಿಗೆ ಚಾಲನೆ ಕೊಡಲಾಗಿದೆ.

ಹಂತ ಹಂತವಾಗಿ ಕೆಲಸಗಳನ್ನು ಪ್ರಾರಂಭ ಮಾಡಲಾಗುತ್ತದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಬಂದ ಮೇಲೆ ರೈಲ್ವೆ ಇಲಾಖೆಗೆ ಒಂದು ಕಾಯಕಲ್ಪ ಕೊಟ್ಟಿದ್ದಾರೆ ಎಂದು ಸೋಮಣ್ಣ ಹೇಳಿದರು.

ಇನ್ನೂ ತುಮಕೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೇಡಿಕೆ ಹೆಚ್ಚಿದ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು 34 ಜನ ಶಾಸಕರು ಜಯಚಂದ್ರ ನೇತೃತ್ವದಲ್ಲಿ ದೆಹಲಿಗೆ ಬಂದು ನನಗೆ ಮನವಿ ಕೊಟ್ಟಿದ್ದಾರೆ.

ಅದನ್ನು ನಮ್ಮ ನಾಗರಿಕ ವಿಮಾನಯಾನ ಇಲಾಖೆ ಸಚಿವ ನಾಯ್ಡು ಅವರಿಗೆ ಸಲ್ಲಿಕೆ ಮಾಡಲಾಗಿದೆ. ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸುವುದಕ್ಕೂ ಮೊದಲೇ ಈ ಪ್ರಕ್ರಿಯೆ ಆಗಿತ್ತು ಎಂದರು.

Leave a comment

Leave a Reply

Your email address will not be published. Required fields are marked *

Related Articles

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...