thekarnatakatoday.com
National

ತಮಿಳುನಾಡು ಚುನಾವಣೆಗೆಎನ್ ಡಿ ಎ ನೇತೃತ್ವದಲ್ಲಿ ಎಐಎಡಿಎಂಕೆ-ಬಿಜೆಪಿ ಮೈತ್ರಿ; ಕೇಂದ್ರ ಗ್ರಹ ಸಚಿವ ಅಮಿತ್ ಶಾ ಘೋಷಣೆ

2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆಯನ್ನು ಅಧಿಕಾರದಿಂದ ಕೆಳಗಿಳಿಸಲು ತಮ್ಮ ಪಕ್ಷ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರು ಶುಕ್ರವಾರ ಘೋಷಿಸಿದ್ದಾರೆ. 2026ರಲ್ಲಿ ತಮಿಳುನಾಡಿನಲ್ಲಿ ಎನ್ ಡಿಎ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅಮಿತ್ ಶಾ, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಎನ್ ಡಿಎ ಮೈತ್ರಿಕೂಟದ ನೇತೃತ್ವ ವಹಿಸಲಿದ್ದಾರೆ ಎಂದು ಹೇಳಿದರು. ಉಚ್ಚಾಟಿತ ಎಐಎಡಿಎಂಕೆ ನಾಯಕರಾದ ಓ ಪನ್ನೀರ್ಸೆಲ್ವಂ ಮತ್ತು ಎಎಂಎಂಕೆ ನಾಯಕ ಟಿಟಿವಿ ದಿನಕರನ್ ಅವರನ್ನು ಮೈತ್ರಿಕೂಟದಲ್ಲಿ ಸೇರಿಸಿಕೊಳ್ಳಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಮಿತ್ ಶಾ, ಬಿಜೆಪಿ, ಎಐಎಡಿಎಂಕೆಯ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು. ತಮಿಳುನಾಡು ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಅವಿರೋಧ ಆಯ್ಕೆ ಈ ಮೈತ್ರಿಕೂಟವು ಪರಸ್ಪರ ಹಿತಾಸಕ್ತಿಯಿಂದ ಹುಟ್ಟಿಕೊಂಡಿದೆ ಮತ್ತು ಎರಡೂ ಪಕ್ಷಗಳು ಈ ಹಿಂದೆ ಒಟ್ಟಿಗೆ ಚುನಾವಣೆ ಎದುರಿಸಿದ್ದವು ಎಂದು ಅಮಿತ್ ಶಾ ನೆನಪಿಸಿಕೊಂಡರು. ಪಳನಿಸ್ವಾಮಿ, ಹಿರಿಯ ಎಐಎಡಿಎಂಕೆ ನಾಯಕರಾದ ಕೆಪಿ ಮುನುಸಾಮಿ ಮತ್ತು ಎಸ್‌ಪಿ ವೇಲುಮಣಿ, ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಮತ್ತು ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನೈನಾರ್ ನಾಗೇಂದ್ರನ್ ಕೂಡ ಮೈತ್ರಿ ಘೋಷಣೆಯ ಸಮಯದಲ್ಲಿ ಉಪಸ್ಥಿತರಿದ್ದರು.

Related posts

ಭಾರತದ ವಿವಿಧ ನಗರಗಳನ್ನು ಗುರಿಯಾಗಿರಿಸಿದ ಪಾಕಿಸ್ತಾನದ 32ಡ್ರೋನ್ ಗಳನ್ನು ಹೊಡೆದಿರುಳಿಸಿದ ಭಾರತೀಯ ಸೇನೆ

The Karnataka Today

ಮಹಾರಾಷ್ಟ್ರಔರಂಗಜೇಬ್ ನನ್ನು ಹೊಗಳಿ ಟೀಕೆ ಗುರಿಯಾಗಿದ್ದ ಎಸ್ ಪಿ ಶಾಸಕ ಅಬು ಅಜ್ಮಿ ಗೆ ಬಜೆಟ್ ಅಧಿವೇಶನ ಮುಗಿಯುವ ವರೆಗೂ ಅಮಾನತು

The Karnataka Today

ಚೆಕ್‌ಪಾಯಿಂಟ್‌ನಲ್ಲಿ ಟ್ರಕ್ ನಿಲ್ಲಿಸದೆ ಪರಾರಿಯಾದ ಚಾಲಕ:  ಬೆನ್ನಟ್ಟಿದ ಸೇನೆಯಿಂದ ಗುಂಡಿನ ದಾಳಿ, ವಸೀಮ್ ಬಲಿ!

The Karnataka Today

Leave a Comment