ಮಾಜಿ ಡಾನ್ ಮುತ್ತಪ್ಪ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ರಾಕೇಶ್ ಮಲ್ಲಿ ಹಾಗೂ ಮುತ್ತಪ್ಪರೈ ಎರಡನೇ ಪತ್ನಿ ಅನುರಾಧ ಸೇರಿ ನಾಲ್ವರ ವಿರುದ್ಧ ಎಫ್ ಐ ಆರ್

36

ಭೂಗತ ಲೋಕದ ಮಾಜಿ ಡಾನ್‌ ಮುತ್ತಪ್ಪ ರೈ ಅವರ ಪುತ್ರ 35 ವರ್ಷದ ರಿಕ್ಕಿ ರೈ ಮೇಲೆ ತಾಲ್ಲೂಕಿನ ಬಿಡದಿ ಹೋಬಳಿಯ ಕರಿಯಪ್ಪನದೊಡ್ಡಿಯಲ್ಲಿ ರಾತ್ರಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ, ಬಿಡದಿ ಪೊಲೀಸ್ ಠಾಣೆಯಲ್ಲಿ ಶನಿವಾರ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.


ರಿಕ್ಕಿ ಅವರ ಕಾರು ಚಾಲಕ ಜಿ. ಬಸವರಾಜು ನೀಡಿದ ದೂರಿನ ಮೇರೆಗೆ ಮುತ್ತಪ್ಪ ರೈಗೆ ಆಪ್ತವಾಗಿದ್ದ ರಾಕೇಶ್ ಮಲ್ಲಿ, ರೈ ಅವರ ಎರಡನೇ ಪತ್ನಿ ಅನುರಾಧ, ನಿತೇಶ್ ಎಸ್ಟೇಟ್ ಮಾಲೀಕರಾದ ನಿತೇಶ್ ಶೆಟ್ಟಿ, ವೈದ್ಯನಾಥನ್ ಹಾಗೂ ಸಹಚರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೂದಳೆಲೆ ಅಂತರದಲ್ಲಿ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮ್ಯಾನ್ ರಿಕ್ಕಿ ರೈ ಬಚಾವ್ ಆಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿಗೆ ಚಿಕಿತ್ಸೆ ಮುಂದುವರೆದಿದೆ. ಘಟನೆ ವೇಳೆ ಬಸವರಾಜ್ ಕಾರು ಚಾಲನೆ ಮಾಡುತ್ತಿದ್ದರು.

ಹೀಗಾಗಿ ಫೈರಿಂಗ್ ಆಗುತ್ತಿದ್ದಂತೆ ಅವರು ಮುಂದೆ ಬಾಗಿದ್ದಾರೆ. ಇದೀಗ ಬಸವರಾಜ್ ದೂರು ಆಧರಿಸಿ A1 ರಾಕೇಶ್ ಮಲ್ಲಿ, A2 ಅನುರಾಧಾ, A3 ನಿತೇಶ್ ಶೆಟ್ಟಿ ಹಾಗೂ A4 ವೈದ್ಯನಾಥನ್ ವಿರುದ್ಧ ಬಿಎನ್ಎಸ್ 109,3(5) ಹಾಗೂ ಆರ್ಮ್ಸ್ ಆ್ಯಕ್ಟ್ ಅಡಿ ಕೇಸ್ ದಾಖಲಾಗಿದೆ. ರಿಯಲ್ ಎಸ್ಟೇಟ್ ವಿಚಾರವಾಗಿ ಈ ಹಿಂದೆಯೂ ವಿವಾದವಾಗಿತ್ತು. ಈ ಹಿನ್ನೆಲೆಯಲ್ಲಿ ರಿಕ್ಕಿ ರೈ ಮೇಲೆ ಫೈರಿಂಗ್ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಬಸವರಾಜುವನ್ನು ವಿಚಾರಣೆ ಮಾಡಿದ ಪೊಲೀಸ್, ಒಂದು ಬಾರಿ ದೊಡ್ಡ ಸದ್ದು ಕೇಳಿ ಬಂತ್ತು ಎಂದಿದ್ದಾರೆ. ಹಾಗಾಗಿ ಕಾರಿಗೆ ತಗುಲಿರುವ ಗುಂಡಿನ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿದೆ

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಮನೆ ಸಿಬ್ಬಂದಿ, ಆಪ್ತರಿಂದ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ರಿಕ್ಕಿ ರೈ ವಿದೇಶದಿಂದ ಬಂದಿದ್ದು ಯಾವಾಗ, ವ್ಯವಹಾರಗಳೇನು?

ಇತ್ತೀಚೆಗೆ ಯಾವುದಾದರೂ ವ್ಯವಹಾರದಲ್ಲಿ ಗಲಾಟೆ ಆಗಿತ್ತಾ? ರಾಮನಗರ ತಾಲೂಕಿನ ಬಿಡದಿ ಮನೆಯಲ್ಲಿ ಯಾರ್ಯಾರು ಇದ್ದಾರೆ? ರಿಕ್ಕಿ ಮನೆಗೆ ಹೊಸದಾಗಿ ಯಾರಾದರು ಕೆಲಸಕ್ಕೆ ಸೇರಿಕೊಂಡಿದ್ರಾ? ಹಳೇ ದ್ವೇಷ, ಅಸ್ತಿ ವಿವಾದ, ವ್ಯವಹಾರ ಕುರಿತು ಪೊಲೀಸರು ತನಿಖೆ ಶುರು ಮಾಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...