ಬಾಂಗ್ಲಾದೇಶ ಹಿಂದೂ ಮುಖಂಡ ಭಬೇಶ್ ಚಂದ್ರ ರಾಯ್ ಅವರ ಹತ್ಯೆ ತೀವ್ರವಾಗಿ ಖಂಡಿಸಿದ ಭಾರತ ಸರಕಾರ

64

“ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಮುಖಂಡ ಭಬೇಶ್ ಚಂದ್ರ ರಾಯ್ ಅವರ ಹತ್ಯೆಯನ್ನು ಭಾರತ ಶನಿವಾರ ಬಲವಾಗಿ ಖಂಡಿಸಿದೆ. ಇದು ನೆರೆಯ ದೇಶದ ಮಧ್ಯಂತರ ಸರ್ಕಾರದಡಿ ಅಲ್ಪಸಂಖ್ಯಾತರ ಮೇಲಿನ ವ್ಯವಸ್ಥಿತ ಕಿರುಕುಳದ ಭಾಗವಾಗಿದೆ ಎಂದು ಕರೆದಿದೆ.

ಉತ್ತರ ಬಾಂಗ್ಲಾದೇಶದ ದಿನಜ್‌ಪುರ ಜಿಲ್ಲೆಯ ಅವರ ನಿವಾಸದಿಂದ ಅಪಹರಿಸಲಾಗಿದ್ದ 58 ವರ್ಷದ ರಾಯ್ ಅವರ ಮಾರಾಣಾಂತಿಕವಾಗಿ ಹಲ್ಲೆ ನಡೆಸಿದ್ದು, ತೀವ್ರ ಗಾಯಗಳಿಂದ ಮೃತಪಟ್ಟಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ರಾಯ್ ಅವರು ಬಾಂಗ್ಲಾದೇಶ ಪೂಜಾ ಉದ್ಜಪನ್ ಪರಿಷತ್ತಿನ ಬಿರಾಲ್ ಘಟಕದ ಉಪಾಧ್ಯಕ್ಷರಾಗಿದ್ದರು ಮತ್ತು ಹಿಂದೂ ಸಮುದಾಯದಲ್ಲಿ ಪ್ರಭಾವಿ ವ್ಯಕ್ತಿಯಾಗಿದ್ದರು ಎನ್ನಲಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)ಇಂತಹ ಘಟನೆಗಳ ಅಪರಾಧಿಗಳು ನಿರ್ಭಯದಿಂದ ಅಲೆದಾಡುತ್ತಿದ್ದು,

ಇದು ಮಧ್ಯಂತರ ಸರ್ಕಾರದಡಿ ಹಿಂದೂ ಅಲ್ಪಸಂಖ್ಯಾತರನ್ನು ವ್ಯವಸ್ಥಿತವಾಗಿ ಶೋಷಿಸುವ ಮಾದರಿಯ ಹತ್ಯೆಯಾಗಿದೆ. ಅಲ್ಪಸಂಖ್ಯಾತ ಸಮುದಾಯಗಳನ್ನು ರಕ್ಷಿಸಲು ಬಾಂಗ್ಲಾದೇಶದ ಜವಾಬ್ದಾರಿಗಳನ್ನು ಭಾರತ ನೆನಪಿದೆ.

“ಈ ಘಟನೆಯನ್ನು ಖಂಡಿಸುತ್ತೇವೆ. ಮಧ್ಯಂತರ ಸರ್ಕಾರ ಹಿಂದೂಗಳು ಸೇರಿದಂತೆ ಎಲ್ಲಾ ಅಲ್ಪಸಂಖ್ಯಾತರನ್ನು ರಕ್ಷಿಸುವ ಜವಾಬ್ದಾರಿಯನ್ನು ಮತ್ತೊಮ್ಮೆ ನೆನಪಿಸುತ್ತೇವೆ ಎಂದು ಹೇಳಿದೆ.

ದಿ ಡೈಲಿ ಸ್ಟಾರ್ ಪ್ರಕಾರ, ಗುರುವಾರ ಸಂಜೆ 4-30ರ ಸುಮಾರಿನಲ್ಲಿ ರಾಯ್ ಫೋನ್ ಕರೆ ಸ್ವೀಕರಿಸಿದ್ದಾರೆ. ಅವರು ಮನೆಯಲ್ಲಿ ಇದ್ದಾರೆಯೇ ಎಂಬುದನ್ನು ಖಚಿಪಡಿಸಿಕೊಳ್ಳಲು ದುಷ್ಕರ್ಮಿಗಳು ಮಾಡಿದ ಕರೆ ಎನ್ನಲಾಗಿದೆ.

ಬಳಿಕ ಅರ್ಧಗಂಟೆಯಲ್ಲಿ ಎರಡು ಸ್ಕೂಟರ್ ನಲ್ಲಿ ಬಂದ ನಾಲ್ವರು ರಾಯ್ ಅವರನ್ನು ಢಾಕಾದಿಂದ ಸುಮಾರು 330 ಕಿ.ಮೀ ದೂರದಲ್ಲಿರುವ ಅವರ ಮನೆಯಿಂದ ಅಪಹರಿಸಿದ್ದಾರೆ. ರಾಯ್ ಅವರು ಗುರುವಾರ ಸಂಜೆ 4:30 ರ ಸುಮಾರಿಗೆ ಫೋನ್ ಕರೆಯನ್ನು ಸ್ವೀಕರಿಸಿದರು,

ಮನೆಯಲ್ಲಿ ಅವರ ಉಪಸ್ಥಿತಿಯನ್ನು ದೃಢೀಕರಿಸುವ ದುಷ್ಕರ್ಮಿಗಳಿಂದ ನಂಬಲಾಗಿದೆ. ಸರಿಸುಮಾರು 30 ನಿಮಿಷಗಳ ನಂತರ, ಎರಡು ಮೋಟಾರ್ ಸೈಕಲ್‌ಗಳಲ್ಲಿ ಬಂದ ನಾಲ್ವರು ಢಾಕಾದಿಂದ ವಾಯುವ್ಯಕ್ಕೆ 330 ಕಿಲೋಮೀಟರ್ ದೂರದಲ್ಲಿರುವ ಬಸುದೇಬ್‌ಪುರ ಗ್ರಾಮದ ಅವರ ನಿವಾಸದಿಂದ ಅವರನ್ನು ಅಪಹರಿಸಿದ್ದಾರೆ.

ಬಳಿಕ ಅವರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ರಾಯ್ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಮನೆಗೆ ವಾಪಸ್ಸಾದಾಗ ಅವರನ್ನು ದಿನಾಜ್‌ಪುರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟೊತ್ತಿಗೆ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು.

ಪ್ರಕರಣ ದಾಖಲಿಸಲು ಸಿದ್ಧತೆ ನಡೆಸಲಾಗಿದ್ದು, ದಾಳಿಕೋರರನ್ನು ಗುರುತಿಸಿ ಬಂಧಿಸುವ ಪ್ರಯತ್ನ ಮುಂದುವರಿದಿದೆ ಎಂದು ಬೀರಾಲ್ ಪೊಲೀಸ್ ಠಾಣೆ ಪ್ರಭಾರಿ ಅಧಿಕಾರಿ ಅಬ್ದುಸ್ ಸಬೂರ್ ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಭಾರತ ವಿರುದ್ಧ ಯುದ್ಧಕ್ಕೂ ಹಿಂಜರಿಯುವುದಿಲ್ಲ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಉದ್ಧಟತನ

“ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದದ ವಿವಾದದ ನಡುವೆ ಭಾರತಕ್ಕೆ ಪಾಕಿಸ್ತಾನ ಮತ್ತೊಮ್ಮೆ ಯುದ್ಧದ ಬೆದರಿಕೆ ಹಾಕಿದೆ....

ತನ್ನ ಪ್ರದೇಶಗಳಿಗೆ ಇಸ್ಲಾಮಿ ಹೆಸರುಗಳ ಕೈ ಬಿಟ್ಟು ಹಿಂದೂ ಹೆಸರು ಮರುನಾಮಕರಣ, ಬದಲಾಗುತ್ತಿದೇಯಾ ಪಾಕಿಸ್ತಾನ??

ಲಾಹೋರ್: ಭಾರತದ ಪ್ರಧಾನಿ ಮೋದಿ ಅಖಂಡ ಭಾರತದ ಕುರಿತು ಮಾಡಿದ್ದ ಭಾಷಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲಿ...

ದೇಶ ರಕ್ಷಣೆಗೆ 92 ಶತಕೋಟಿ ಡಾಲರ್ ಬಜೆಟ್ ವಿಶ್ವದ 5ನೇ ರಾಷ್ಟ್ರವಾಗಿ ಎಲೈಟ್ ಗ್ರೂಪ್ ಸೇರಿದ ಭಾರತ!

ನವದೆಹಲಿ: ರಕ್ಷಣಾ ವಿಭಾಗದಲ್ಲಿ ಭಾರತ ಐತಿಹಾಸಿಕ ಮೈಲುಗಲ್ಲು ಸಾಧಿಸಿದ್ದು, ದೇಶದ ರಕ್ಷಣಾ ಬಜೆಟ್ 92 ಶತಕೋಟಿ...

ಅಮೆರಿಕ ಶ್ವೇತಭವನದಲ್ಲಿ ಔತಣಕೂಟ ವೇಳೆ ಶೂಟೌಟ್ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್,

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕದ ಆಡಳಿತ ಶಕ್ತಿಕೇಂದ್ರ ವೈಟ್ ಹೌಸ್ ನಲ್ಲಿ ಕ್ಷಿಪ್ರ ಬೆಳವಣಿಗೆಯೊಂದು ನಡೆದಿದೆ....