ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಆಡಳಿತದ  ಟ್ರಂಪ್ ನೀತಿ ವಿರೋಧಿಸಿ ಬೃಹತ್  ಪ್ರತಿಭಟನೆ

35

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಶನಿವಾರ ಅಮೆರಿಕದಾದ್ಯಂತ ದೊಡ್ಡ ಮತ್ತು ಸಣ್ಣ ಸಮುದಾಯಗಳ ಬೀದಿಗಿಳಿದು ಪ್ರತಿಭಟನೆ ನಡೆಸಿದವು. ಟ್ರಂಪ್ ನೀತಿ ದೇಶದ ಪ್ರಜಾಪ್ರಭುತ್ವದ ಆದರ್ಶಗಳಿಗೆ ಅಪಾಯ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಮಿಡ್‌ಟೌನ್ ಮ್ಯಾನ್‌ಹ್ಯಾಟನ್‌ನಲ್ಲಿ ಪ್ರತಿಭಟನಾ ಮೆರವಣಿಗೆ ಮತ್ತು ಶ್ವೇತಭವನದ ಮುಂದೆ ರ್ಯಾಲಿ ನಡೆಸಲಾಯಿತು. 250 ವರ್ಷಗಳ ಹಿಂದೆ 1775ರ ಏಪ್ರಿಲ್ 19 ರಂದು ಕ್ರಾಂತಿಕಾರಿ ಸಮರ ಆರಂಭಗೊಂಡ ಸ್ಮರಣಾರ್ಥ ಮೆರವಣಿಗೆಗಳನ್ನು ನಡೆಸಲಾಯಿತು.

ಅಮೆರಿಕದ್ಯಂತ ಸುಮಾರು 400 ಪ್ರತಿಭಟನಾ ರ್ಯಾಲಿಗಳನ್ನು ಯೋಜಿಸಲಾಗಿತ್ತು. ಪ್ರತಿಭಟನಾಕಾರರು ಫೆಡರಲ್ ಉದ್ಯೋಗ ಕಡಿತ, ಆರ್ಥಿಕ ನೀತಿಗಳು ಮತ್ತು ನಾಗರಿಕ ಸ್ವಾತಂತ್ರ್ಯ ಉಲ್ಲಂಘನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಡೆನ್ಸರ್‌ನಲ್ಲಿ ನೂರಾರು ಪ್ರತಿಭಟನಾಕಾರರು ಕೊಲರಾಡೋ ಯಾ ರಾಜಧಾನಿಯಲ್ಲಿ ನೆರೆದು ವಲಸಿಗರೊಂದಿಗೆ ಸೌಹಾರ್ದ ಸಾರುವ ಮತ್ತು ಹ್ಯಾಂಡ್ಸ್ ಆಫ್ ಎಂಬ ಭಿತ್ತಿಪತ್ರಗಳನ್ನು ಹಿಡಿದಿದ್ದರು. ಶೋಕ ಸೂಚಕವಾಗಿ ಅನೇಕರು ಅಮೆರಿಕದ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಿಡಿದಿದ್ದರು.

ಪೋರ್ಟ್‌ಲ್ಯಾಂಡ್, ಓರೆಗಾನ್‌ಗಳ ಮುಖಾಂತರ ನೂರಾರು ಮಂದಿ ಮೆರವಣಿಗೆಯಲ್ಲಿ ಸಾಗಿದರೆ, ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿ ನೂರಾರು ಜನರು ಟ್ರಂಪ್‌ ಅವರನ್ನು ಪದಚ್ಯುತಿಗೊಳಿಸಿ, ಇಲ್ಲವೆ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿ ಎಂದು ಸಮುದ್ರದಂಡೆಯ ಮರಳಿನ ಮೇಲೆ ಬರೆದು ಆಕ್ರೋಶ ವ್ಯಕ್ತಪಡಿಸಿದರು.

ಟ್ರಂಪ್ ಸರ್ಕಾರದ ಸರ್ವಾಧಿಕಾರಿ ಮನೋಭಾವದಿಂದ ದೇಶದ ಪ್ರಜಾಪ್ರಭುತ್ವವನ್ನು ಉಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇದು ಶಾಂತಿಯುತ ಪ್ರತಿಭಟನೆಯಾಗಿದ್ದು, ಯಾರಿಗೂ ಹಾನಿ ಮಾಡುವ ಉದ್ದೇಶವನ್ನು ಹೊಂದಿಲ್ಲ ಎಂದು ಗುಂಪಿನ ವಕ್ತಾರೆ ಹೀದರ್ ಡನ್ ಹೇಳಿದ್ದಾರೆ

. ದೇಶವನ್ನು ಒಗ್ಗೂಡಿಸುವುದು ಮತ್ತು ಸಂವಿಧಾನವನ್ನು ರಕ್ಷಿಸುವುದು ಈ ಪ್ರತಿಭಟನೆಯ ಉದ್ದೇಶ ಎಂದಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಬಾಂಗ್ಲಾದೇಶದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸಮಾರಂಭದಲ್ಲಿ ಭಾರತದ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ

“ಫೆಬ್ರವರಿ 17 ರಂದು ಬಾಂಗ್ಲಾದೇಶದ ಮುಂದಿನ ಪ್ರಧಾನಿ ತಾರಿಕ್ ರೆಹಮಾನ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗಲು...

ಮಾಜಿ ಪ್ರಧಾನಮಂತ್ರಿ ಖಾಲೇದಾ ಜಿಯಾ ಪುತ್ರ ತಾರಿಕ್ ರೆಹಮಾನ್ ನೇತೃತ್ವದ ಬಿಎನ್ ಪಿ ಪಕ್ಷ ಕ್ಕೆ ಬಹುಮತ ಪ್ರಧಾನಿ ಮೋದಿ ಅಭಿನಂದನೆ

ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಐತಿಹಾಸಿಕ ಗೆಲುವು ಸಾಧಿಸಿದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯನ್ನು...

ಬಲೂಚಿಸ್ತಾನದಲ್ಲಿ ಅಶಾಂತಿ ಪ್ರಯತ್ನಗಳಲ್ಲಿ ಭಾರತ ಭಾಗಿ ಎಂಬ ಪಾಕಿಸ್ತಾನದ ಆರೋಪ ಸ್ಪಷ್ಟವಾಗಿ ತಿರಸ್ಕರಿಸಿದ ಭಾರತ

ಬಲೂಚಿಸ್ತಾನದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನಗಳಲ್ಲಿ ಭಾರತದ ಭಾಗಿಯಾಗಿದೆ ಎಂಬ ಪಾಕಿಸ್ತಾನದ ಆರೋಪಗಳನ್ನು ಭಾರತ ಸ್ಪಷ್ಟವಾಗಿ ತಿರಸ್ಕರಿಸಿದೆ....

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂದುಗಳ ವಿರುದ್ಧ ದೌರ್ಜನ್ಯ ಹಿಂದು ಯುವಕನ ಕೊಲೆ

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಹಿಂದುಗಳ ಕೊಲೆ ನಡೆಯುತ್ತಿದೆ. ನಿನ್ನೆಯೂ ಸಹ ಹಿಂದೂ ಯುವಕನನ್ನು ಕೊಲ್ಲಲಾಗಿದೆ. ಶುಕ್ರವಾರ...