ಪಹಲ್ಗಾಮ್ ಉಗ್ರರ ದಾಳಿ: ಇಂದುಕೇಂದ್ರ ಸರ್ಕಾರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ

41
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಪೈಶಾಚಿಕ ಕೃತ್ಯಕ್ಕೆ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.


ಈ ಬೆನ್ನಲ್ಲೇ ಇಂದು ಉನ್ನತಮಟ್ಟದ ಸಂಪುಟ ಸಮಿತಿ ಸಭೆ ನಡೆಸಿದ ಕೇಂದ್ರ ಸರ್ಕಾರ ಗುರುವಾರ ಸರ್ವಪಕ್ಷಗಳ ಸಭೆ ಕರೆದಿದೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರೂ ಉಪಸ್ಥಿತರಿರಲಿದ್ದಾರೆ.

ಪಹಲ್ಗಾಮ್‌ ದಾಳಿಯ ಕುರಿತು ಸರ್ವಪಕ್ಷ ಸಭೆಗೆ ಮಾಹಿತಿ ನೀಡಲಿದ್ದಾರೆ. ಜೊತೆಗೆ ಇಂದಿನ ಸಭೆಯಲ್ಲಿ ಪಾಕ್‌ ಉಗ್ರರನ್ನು ಮಟ್ಟಹಾಕಲು, ಪಾಕ್‌ ಸಂಬಂಧ ಕಡಿದುಕೊಳ್ಳುವ ಬಗ್ಗೆ ತೆಗೆದುಕೊಂಡ ನಿರ್ಧಾರಗಳನ್ನು ವಿವರಿಸಲಿದ್ದಾರೆ.

ಸಭೆಯಲ್ಲಿ, ರಾಜನಾಥ್ ಸಿಂಗ್ ಮತ್ತು ಇತರ ಸರ್ಕಾರಿ ಅಧಿಕಾರಿಗಳು ಭಯೋತ್ಪಾದಕ ದಾಳಿ, ನಂತರ ಸಂಗ್ರಹಿಸಿದ ಪುರಾವೆಗಳು ಮತ್ತು ಘಟನೆಯ ನಂತರ ಪಾಕಿಸ್ತಾನದ ವಿರುದ್ಧ ತೆಗೆದುಕೊಂಡ ಕ್ರಮಗಳ ಬಗ್ಗೆ ನಾಯಕರಿಗೆ ತಿಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉಗ್ರರ ದಾಳಿಗೆ ಸಂಬಂಧಿಸಿದಂತೆ,

ಕೇಂದ್ರ ಸರ್ಕಾರ ತಕ್ಷಣ ಸರ್ವಪಕ್ಷ ಸಭೆ ಕರೆದು ಎಲ್ಲರ ಅಭಿಪ್ರಾಯ ಪಡೆಯುವುದರ ಜತೆಗೆ ಭಯೋತ್ಪಾದಕರನ್ನು ಹುಡುಕಿ ಹೊಡೆದು ಹಾಕಬೇಕು’ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ಲಖನೌ: ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು...

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...