ಮಹಾರಾಷ್ಟ್ರ 111 ಪಾಕ್ ಪ್ರಜೆಗಳಿಗೆ ಎರಡು ದಿನಗಳಲ್ಲಿ ಭಾರತ ತೊರೆಯುವಂತೆ ಸೂಚನೆ!

35

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ವಾಸಿಸುತ್ತಿರುವ 111 ಪಾಕಿಸ್ತಾನಿ ಪ್ರಜೆಗಳಿಗೆ ಏ. 27 ರೊಳಗೆ ಭಾರತವನ್ನು ತೊರೆಯುವಂತೆ ಜಿಲ್ಲಾಡಳಿತ ಸೂಚಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕ್ ನಾಗರಿಕರಿಗೆ ನೀಡಲಾದ ಎಲ್ಲಾ ರೀತಿಯ ವೀಸಾಗಳನ್ನು ಅಮಾನತುಗೊಳಿಸಿದ ನಂತರ ಈ ಕ್ರಮ ಕೈಗೊಂಡಿದೆ. ಆದರೆ ವೈದ್ಯಕೀಯ ವೀಸಾಗಳು ಹೆಚ್ಚುವರಿಯಾಗಿ ಎರಡು ದಿನಗಳವರೆಗೆ ಮಾನ್ಯವಾಗಿರುತ್ತವೆ.

ವೀಸಾ ನೀಡುವ ಕೇಂದ್ರಗಳು ಮತ್ತು ಪಾಸ್‌ಪೋರ್ಟ್ ಕಚೇರಿಯಿಂದ ಪಾಕಿಸ್ತಾನಿ ಪ್ರಜೆಗಳ ಡೇಟಾವನ್ನು ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿತೇಂದ್ರ ದುಡಿ ಸುದ್ದಿಗಾರರಿಗೆ ತಿಳಿಸಿದರು.

“ಇದುವರೆಗೆ 111 ಪಾಕಿಸ್ತಾನಿ ಪ್ರಜೆಗಳ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಅವರೆಲ್ಲರೂ ನಿಗದಿತ ಗಡುವಿನೊಳಗೆ ದೇಶ ತೊರೆಯುವುದು ಕಡ್ಡಾಯ ಎಂದು ತಿಳಿಸಲಾಗಿದೆ.

ಪ್ರವಾಸೋದ್ಯಮ, ವೈದ್ಯಕೀಯ ಚಿಕಿತ್ಸೆ ಸೇರಿದಂತೆ ವಿವಿಧ ಕಾರಣಗಳಿಗಾಗಿ ವೀಸಾಗಳನ್ನು ನೀಡಲಾಗಿದ್ದು, ‘ವೈದ್ಯಕೀಯ ಕಾರಣಕ್ಕಾಗಿ ಇಲ್ಲಿರುವವರು ಏಪ್ರಿಲ್ 29 ರೊಳಗೆ ಹೊರಡಲು ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

‘ನಿಮ್ಮ ರಾಜ್ಯಗಳಲ್ಲಿರುವ ಪಾಕಿಸ್ತಾನ ಪ್ರಜೆಗಳನ್ನು ಗುರುತಿಸಿ’: ಮುಖ್ಯಮಂತ್ರಿಗಳಿಗೆ ಗೃಹ ಸಚಿವ ಅಮಿತ್ ಶಾ ಸೂಚನೆ ಈ ಮಧ್ಯೆ ಛತ್ರಪತಿ ಸಂಭಾಜಿನಗರದ ಪೊಲೀಸರು 57 ಪಾಕಿಸ್ತಾನಿ ಪ್ರಜೆಗಳು ದೀರ್ಘಾವಧಿಯ ವೀಸಾದಲ್ಲಿ ನಗರದಲ್ಲಿದ್ದಾರೆ. ಈ ಪ್ರಕರಣದಲ್ಲಿ ಹೆಚ್ಚಿನ ಸೂಚನೆಗಳಿಗಾಗಿ ಜಿಲ್ಲಾಧಿಕಾರಿ ಕಚೇರಿ ಕಾಯುತ್ತಿರುವುದಾಗಿ ಜಿಲ್ಲಾ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...