thekarnatakatoday.com
World News

ಭಾರತ ಪಾಕಿಸ್ತಾನ ಉದ್ದಿಗ್ನ ಪರಿಸ್ಥಿತಿ   ಪಾಕಿಸ್ತಾನ ಬೆಂಬಲಕ್ಕೆ ನಿಂತ ಚೀನಾ

“ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ಬಳಿಕ ಹದಗೆಟ್ಟಿರುವ ಭಾರತ ಪಾಕ್ ನಡುವಿನ ಉದ್ವಿಗ್ನತೆ ಕುರಿತು ಇದೇ ಮೊದಲ ಬಾರಿಗೆ ಚೀನಾ ಪ್ರತಿಕ್ರಿಯೆ ನೀಡಿದ್ದು, ತಮ್ಮ ದೇಶವು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳುವ ಮೂಲಕ ಪಾಕಿಸ್ತಾನದ ಬೆನ್ನಿಗೆ ನಿಂತಿದೆ.


ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಭಾನುವಾರ ಪಾಕಿಸ್ತಾನದ ವಿದೇಶಾಂಗ ಸಚಿವ ಮೊಹಮ್ಮದ್ ಇಶಾಕ್ ದಾರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು, ‘ಭಾರತ ಮತ್ತು ಪಾಕಿಸ್ತಾನ ನಡುವಿನ ಪರಿಸ್ಥಿತಿಯನ್ನು ತಮ್ಮ ದೇಶವು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದ್ದಾರೆ ಎಂದು ಚೀನಾದ ಸರ್ಕಾರಿ ಸ್ವಾಮ್ಯದ ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಭಯೋತ್ಪಾದಕ ದಾಳಿಯ ಬಗ್ಗೆ ನಿಷ್ಪಕ್ಷಪಾತ ತನಿಖೆಯನ್ನು ಚೀನಾ ಬೆಂಬಲಿಸುತ್ತದೆ ಎಂದು ವಾಂಗ್ ತಿಳಿಸಿದ್ದಾರೆ ಎನ್ನಲಾಗಿದೆ. ಅಂತೆಯೇ ಭಾರತ ಮತ್ತು ಪಾಕಿಸ್ತಾನ ಎರಡೂ ಕಡೆಯವರು ಸಂಯಮವನ್ನು ಕಾಯ್ದುಕೊಳ್ಳುತ್ತಾರೆ

. ಪರಸ್ಪರರ ಕಡೆಗೆ ಸಾಗುತ್ತಾರೆ ಮತ್ತು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಕೆಲಸ ಮಾಡುತ್ತಾರೆ ಎಂದು ಚೀನಾ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ರಾಜಕೀಯ ಬ್ಯೂರೋದ ಸದಸ್ಯರೂ ಆಗಿರುವ ವಾಂಗ್ ಅವರು ದೂರವಾಣಿ ಕರೆಯ ಸಮಯದಲ್ಲಿ ಹೇಳಿದರು.

ಭಯೋತ್ಪಾದನಾ ದಾಳಿಯ ನಂತರ ಎರಡು ನೆರೆಹೊರೆಯವರ ನಡುವಿನ ಉದ್ವಿಗ್ನತೆಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪಾಕಿಸ್ತಾನಿ ನಾಯಕ ದಾರ್ ಚೀನಾ ವಿದೇಶಾಂಗ ಸಚಿವ ವಾಂಗ್‌ ಯಿಗೆ ವಿವರಿಸಿದರು.

ಈ ವೇಳೆ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವುದು ಮತ್ತು ಎಲ್ಲಾ ಪಾಕಿಸ್ತಾನಿ ವೀಸಾಗಳನ್ನು ನಿಷೇಧಿಸುವುದು ಮುಂತಾದ ಕ್ರಮಗಳನ್ನು ಭಾರತ ಈಗಾಗಲೇ ಪಾಕಿಸ್ತಾನದ ವಿರುದ್ಧ ತೆಗೆದುಕೊಂಡಿದೆ ಎಂದು ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ವಾಂಗ್ ಯೀ, ‘ಭಯೋತ್ಪಾದನೆಯನ್ನು ಎದುರಿಸುವುದು ಎಲ್ಲಾ ರಾಷ್ಟ್ರಗಳ ಹಂಚಿಕೆಯ ಜವಾಬ್ದಾರಿಯಾಗಿದೆ ಮತ್ತು ಚೀನಾ ಪಾಕಿಸ್ತಾನದ ದೃಢವಾದ ಭಯೋತ್ಪಾದನಾ ನಿಗ್ರಹ ಕ್ರಮಗಳನ್ನು ನಿರಂತರವಾಗಿ ಬೆಂಬಲಿಸುತ್ತದೆ ಎಂದು ಹೇಳಿದರು ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

Related posts

ಬಾಹ್ಯಕಾಶದಿಂದ ಭಾರತದ ಭೂ ಪ್ರದೇಶಗಳ ಸೌಂದರ್ಯ ವರ್ಣಿಸಿದ ಸುನೀತಾ ವಿಲಿಯಮ್ಸ್

The Karnataka Today

26/11 ಮುಂಬೈ ದಾಳಿ ಸೂತ್ರದಾರ ಉಗ್ರ ತಹವ್ವೂರ್ ರಾಣಾ  ಭಾರತಕ್ಕೆ ಗಡಿಪಾರು ಮಾಡಲು ಅಮೆರಿಕ ಸುಪ್ರೀಂ ಕೋರ್ಟ್ ಸಮ್ಮತಿ

The Karnataka Today

ಪ್ರಧಾನಿ ನರೇಂದ್ರ ಮೋದಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III’ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ

The Karnataka Today

Leave a Comment