thekarnatakatoday.com
Karavali Karnataka

ರೈಲ್ವೆ ಪರೀಕ್ಷೆಯಲ್ಲಿ ಮಾರ್ಗಸೂಚಿ ಮಂಗಳಸೂತ್ರ ತೆಗೆಯುವ ಷರತ್ತು ಸರಿಯಲ್ಲ :: ನವೀನ್ ಸಾಲ್ಯಾನ್ ಆಕ್ರೋಶ

ರೈಲ್ವೆ ನೇಮಕಾತಿ ಮಂಡಳಿಯು ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಯನ್ನು ಎ. 29ರಂದು ಹಮ್ಮಿಕೊಂಡಿದೆ.

ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ತೆರಳುವಾಗ ಧಾರ್ಮಿಕ ಸಂಕೇತವಾದ ಮಂಗಳಸೂತ್ರ ಧರಿಸುವಂತಿಲ್ಲ ಎಂದು ಪರೀಕ್ಷೆ ಪ್ರವೇಶಪತ್ರದಲ್ಲಿ ಉಲ್ಲೇಖಿಸಿರುವ ಮಾರ್ಗಸೂಚಿಯಲ್ಲಿ ಸೂಚನೆ ನೀಡಲಾಗಿದೆ

.ರೈಲ್ವೆ ನೇಮಕಾತಿ ಮಂಡಳಿಯ ಈ ಕ್ರಮಕ್ಕ್ಕೆ ಕಾಂಗ್ರೆಸ್ ಮುಖಂಡ ನವೀನ್ ಸಾಲ್ಯಾನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.”

ಮಾನ್ಯ ಜಿಲ್ಲಾಧಿಕಾರಿಗಳೇ, ಇಂತಹ ಆದೇಶವನ್ನು ಕೈಬಿಟ್ಟು ನಡೆಯಲಿರುವ ಪರೀಕ್ಷೆಯಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ಬಾರದ ರೀತಿಯಲ್ಲಿ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಿ”, ಎಂದು ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ನವೀನ್ ಸಾಲ್ಯಾನ್ ಆಗ್ರಹಿಸಿದ್ದಾರೆ.

ರೈಲ್ವೆ ನೇಮಕಾತಿ ಪರೀಕ್ಷೆ ಬರೆಯಬೇಕಾದರೆ ಹಿಂದೂಗಳು ಅವರ ಧಾರ್ಮಿಕ ಚಿಹ್ನೆಯಾದ ಮಂಗಳಸೂತ್ರ ತೆಗೆಯಬೇಕೆಂದು ಸೂಚನೆ ನೀಡಿರುವುದು ಸರಿಯಲ್ಲ.

ಹೆಣ್ಣುಮಕ್ಕಳು ತಾಳಿ ಸರ ಕಳಚುವಂತೆ, ಸಿಂಧೂರ ಅಳಿಸುವಂತೆ ಮಾಡುವುದು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟಾಗುತ್ತದೆ.

ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕ್ರಮಕೈಗೊಳ್ಳಬೇಕು” ಎಂದು ನವೀನ್ ಸಾಲ್ಯಾನ್ ತಿಳಿಸಿದ್ದಾರೆ.

Related posts

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರ ಹೊಡೆದಾಟ ಪೊಲೀಸ್ ಪ್ರವೇಶದ ನಂತರ ಪರಿಸ್ಥಿತಿ ನಿಯಂತ್ರಣ

The Karnataka Today

ಮಲ್ಪೆ ಅಪರಾಧ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಮಗನನ್ನು ಪೊಲೀಸರಿಂದ ರಕ್ಷಿಸಿದ ತಂದೆ ಮೇಲೆ ಪ್ರಕರಣ ದಾಖಲು

The Karnataka Today

ಸಮಾಜಕ್ಕಾಗಿ ಸಣ್ಣ ಪುಟ್ಟ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದವರನ್ನು ಕೂಡ ರೌಡಿಶೀಟರ್ ಮಾಡಿರುವುದರಿಂದ ಅವರನ್ನು ಕ್ರಿಮಿನಲ್ ಎಂದು ಕರೆಯುವುದು ಸರಿಯೇ ಮಂಜುನಾಥ್ ಭಂಡಾರಿಯವರೇ:: ಸುನಿಲ್ ಕೆ ಆರ್

The Karnataka Today

Leave a Comment