thekarnatakatoday.com
National

ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ ಹಾಗೂ ಜನಿವಾರ ತೆಗೆಸಿದಂತೆ ಸೂಚಿಸಲಾಗಿದೆ:: ಕೇಂದ್ರರೈಲ್ವೆ ರಾಜ್ಯ ಸಚಿವ ಸೋಮಣ್ಣ

ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ಅಧಿಕಾರಿಗಳಿಗೆ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅವರು ಸೂಚನೆ ನೀಡಿದ್ದಾರೆ.


ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ವಿವಾದ ಭುಗಿಲೇಳುತ್ತಿದ್ದಂತೆಯೇ ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಸಚಿವ ಸೋಮಣ್ಣ ಅವರ ಗಮನಕ್ಕೆ ತಂದಿದ್ದರು.

ಇದರ ಬೆನ್ನಲ್ಲೇ ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ವಿವಾದಕ್ಕೆ ಅಂತ್ಯ ಹಾಡಿದ್ದಾರೆ. ಸೋಮಣ್ಣ ಅವರ ಸೂಚನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಬ್ರಿಜೇಶ್ ಚೌಟ ಅವರು, ‘ಭಾರತೀಯ ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಮತ್ತು ಆಭರಣಗಳನ್ನು ತೆಗೆಯುವಂತೆ ಮಾಡಬಾರದು.

ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸೂಚನೆ ನೀಡಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ.

ಮಂಗಳಸೂತ್ರ ಹಾಗೂ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕೆಂದು ಹಾಲ್ಟಿಕೆಟ್ನಲ್ಲಿ ಉಲ್ಲೇಖಿಸಲ್ಪಟ್ಟಿದ್ದ ಬಗ್ಗೆ ನಾವು ಅವರ ಗಮನಕ್ಕೆ ತಂದಿದ್ದೆವು.

ಅವರು ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ಹೇಳಿದ್ದಾರೆ. ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ಏಪ್ರಿಲ್ 28, 29 ಹಾಗೂ 30 ರಂದು ನಡೆಯಲಿದೆ.

Related posts

ಭಯೋತ್ಪಾದನೆಯಿಂದ ಭಾರತವನ್ನು ಬೆದರಿಸಲು ಸಾಧ್ಯವಿಲ್ಲ ಭಯೋತ್ಪಾದಕ ಚಟುವಟಿಕೆಯಲ್ಲಿರುವವರಿಗೆ ತಕ್ಕ ಉತ್ತರ ನೀಡುತ್ತೇವೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

The Karnataka Today

ರಾಜ್ಯ ವಕ್ಫ್  ಮಂಡಳಿಗೆ 10 ಕೋಟಿ ಮಂಜೂರು ಆದೇಶ ಹಿಂಪಡೆದ ಮಹಾರಾಷ್ಟ್ರ ಸರಕಾರ

The Karnataka Today

ಜಾರ್ಖಂಡ್ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಬಿಡುವುದಿಲ್ಲ ::ಮುಖ್ಯಮಂತ್ರಿ ಹೇಮಂತ್ ಸೊರೆನ್

The Karnataka Today

Leave a Comment