ಬಿಜೆಪಿ 18 ಶಾಸಕರ ಅಮಾನತು ರದ್ದುಗೊಳಿಸುವಂತೆ ಆರ್ ಅಶೋಕ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಿಯೋಗರಾಜ್ಯಪಾಲರ ಭೇಟಿ

24

ಬೆಂಗಳೂರು: ವಿರೋಧ ಪಕ್ಷ ಬಿಜೆಪಿ ಸೋಮವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದು, ವಿಧಾನಸಭೆಯಿಂದ ತನ್ನ 18 ಶಾಸಕರ ಅಮಾನತು ರದ್ದುಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದೆ.

ಪ್ರತಿಪಕ್ಷ ನಾಯಕ ಆರ್ ಅಶೋಕ್ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ನಿಯೋಗವು ಇಂದು ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿತು.

ಶಾಸಕರ ಅಮಾನತು ಮರುಪರಿಶೀಲಿಸುವಂತೆ ಮತ್ತು ಅವರು ಜನಪ್ರತಿನಿಧಿಗಳಾಗಿ ತಮ್ಮ ಜವಾಬ್ದಾರಿಗಳನ್ನು ಮತ್ತೆ ವಹಿಸಿಕೊಳ್ಳಲು ಅನುವು ಮಾಡಿಕೊಡುವಂತೆ ಸ್ಪೀಕರ್ ಯು ಟಿ ಖಾದರ್ ಅವರಿಗೆ ನಿರ್ದೇಶನ ನೀಡಬೇಕೆಂದು ಬಿಜೆಪಿ ನಾಯಕರು ರಾಜ್ಯಪಾಲರಿಗೆ ಮನವಿ ಮಾಡಿದರು.

ರಾಜ್ಯದ ಪ್ರಮುಖ ವಿರೋಧ ಪಕ್ಷಕ್ಕೆ ಸೇರಿದ 18 ಶಾಸಕರ ಅಮಾನತು ಆದೇಶವನ್ನು ಮರುಪರಿಶೀಲಿಸುವಂತೆ ವಿಧಾನಸಭೆಯ ಸ್ಪೀಕರ್ ಗೆ ನಿರ್ದೇಶಿಸುವಂತೆ ನಾವು ಅತ್ಯಂತ ಗೌರವದಿಂದ ಬೇಡಿಕೊಳ್ಳುತ್ತೇವೆ” ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಅಮಾನತು ಆದೇಶ ರದ್ದು ಮಾಡುವಂತೆ ಸ್ಪೀಕರ್ ಯು.ಟಿ ಖಾದರ್ ಅವರಿಗೆ ಬಿಜೆಪಿ ಶಾಸಕರು ಪತ್ರದ ಮೂಲಕ ಹಾಗೂ ಭೇಟಿಯಾಗಿ ಮನವಿ ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ, ಮನವಿ ಸಲ್ಲಿಸಲಾಗಿದೆ

. ಮಾರ್ಚ್ 21 ರಂದು, ಒಂದು ಪ್ರಮುಖ ಬೆಳವಣಿಗೆಯೊಂದರಲ್ಲಿ, ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಹರಿದ ಪ್ರತಿಗಳನ್ನು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿದೆ.

ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಒಳಗೊಂಡ ಹನಿಟ್ರ್ಯಾಪ್ ಪ್ರಕರಣವನ್ನು ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಸದನದ ಬಾವಿಯಲ್ಲಿ ಪ್ರತಿಭಟನೆ ನಡೆಸಿ, ಕಲಾಪಕ್ಕೆ ಅಡ್ಡಿಪಡಿಸಿದ ನಂತರ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...