thekarnatakatoday.com
Karavali Karnataka

ಕ್ರಿಕೆಟ್ ಪಂದ್ಯದ ವೇಳೆ ಜಗಳ; ಗುಂಪಿನ ಯುವಕರಿಂದ ಹಲ್ಲೆ ಯುವಕ ಬಲಿ, 15 ಜನರ ಬಂಧನ 10 ಜನ ಆರೋಪಿಗಳಿಗಾಗಿ ಶೋಧ

ಮಂಗಳೂರು ನಗರದ ಹೊರವಲಯದಲ್ಲಿರುವ ಕುಡುಪು ಗ್ರಾಮದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ನಡೆದ ಜಗಳ ನಡೆದಿದ್ದು, 25ಕ್ಕೂ ಹೆಚ್ಚು ಜನರ ಗುಂಪೊಂದು ಯುವಕನನ್ನು ಥಳಿಸಿ ಕೊಲೆ ಮಾಡಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಏಪ್ರಿಲ್ 27 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಭಟ್ರ ಕಲ್ಲುರ್ಟಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು, ಹತ್ಯೆಯಾದ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ, ಆತನ ಮೇಲೆ ಕೋಲುಗಳಿಂದ ಹಲ್ಲೆ ನಡೆಸಲಾಗಿದೆ ಎಂದರು.

“ದೇವಾಲಯದ ಮೈದಾನದ ಬಳಿ ಯುವಕನ ಶವ ಪತ್ತೆಯಾಗಿದ್ದು, ಆರಂಭದಲ್ಲಿ, ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದರು. ಏಪ್ರಿಲ್ 28 ರಂದು ನಡೆದ ಮರಣೋತ್ತರ ಪರೀಕ್ಷೆಯಲ್ಲಿ ಯುವಕನ ಬೆನ್ನಿನ ಮೇಲೆ ಬಲವಾದ ಹೊಡೆತದ ಗಾಯಗಳಾಗಿದ್ದು, ರಕ್ತಸ್ರಾವ, ಆಘಾತ ಮತ್ತು ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೇ ಯುವಕ ಮೃತಪಟ್ಟಿದ್ದಾರೆ ಎಂದು ದೃಢಪಟ್ಟಿದೆ” ಎಂದರು

ಮಂಗಳೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪಿನಿಂದ ನಡೆದ ಕೊಲೆಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತಾ, 2023ರ ಸೆಕ್ಷನ್ 103(2) ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಪ್ರಕರಣ ಸಂಬಂಧ ಇಲ್ಲಿಯವರೆಗೆ, 15 ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಪೊಲೀಸರು ಕನಿಷ್ಠ ಇನ್ನೂ 10 ಜನರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದರು. “ಕುಡುಪು ನಿವಾಸಿ ಸಚಿನ್ ಎಂದು ಗುರುತಿಸಲಾದ ಪ್ರಮುಖ ಆರೋಪಿ ಈಗಾಗಲೇ ನಮ್ಮ ವಶದಲ್ಲಿದ್ದಾನೆ.

ಈ ಪ್ರಕರಣದಲ್ಲಿ ಅನ್ವಯಿಸಲಾದ ಸೆಕ್ಷನ್ ತುಂಬಾ ಕಠಿಣವಾಗಿದೆ – ಸಾಬೀತಾದರೆ, ಆರೋಪಿಗಳು ವೈಯಕ್ತಿಕವಾಗಿ ಅಥವಾ ಗುಂಪಾಗಿ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆಯನ್ನು ಎದುರಿಸಬಹುದು.

ಅಪರಾಧದಲ್ಲಿ ಐದಕ್ಕೂ ಹೆಚ್ಚು ಜನರು ಭಾಗಿಯಾಗಿರುವುದರಿಂದ ನಾವು ಬಿಎನ್‌ಎಸ್ ಅಡಿಯಲ್ಲಿ ಈ ಸೆಕ್ಷನ್ ಅನ್ನು ಅನ್ವಯಿಸಿದ್ದೇವೆ” ಎಂದು ಅಗರ್‌ವಾಲ್ ಹೇಳಿದ್ದಾರೆ.

Related posts

  ಮಲ್ಪೆ ಮಹಿಳೆ ಮೇಲೆ ಹಲ್ಲೆ ಪ್ರಕರಣದಲ್ಲಿ ಈಗಾಗಲೇ ಸಂತ್ರಸ್ತ ಮಹಿಳೆ ಮೀನುಗಾರ ಮಹಿಳೆಯರ ಮೇಲೆ ದಾಖಲಾದ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಪ್ರಕರಣವನ್ನು ಮುಂದುವರಿಸುವ ಉದ್ದೇಶ ಇಲ್ಲದಿರುವುದರಿಂದ ಮಹಿಳೆಯ ಮರು ಹೇಳಿಕೆ ದಾಖಲಿಸಿ ಕೋರ್ಟಿಗೆ ಸಲ್ಲಿಸುವಂತೆ   ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ::ನವೀನ್ ಸಾಲಿಯಾನ್ ಮನವಿ

The Karnataka Today

ಐಟಿ ಅಧಿಕಾರಿಗಳ ದಾಳಿ ಹೆಸರಿನಲ್ಲಿ ಬೆದರಿಸಿ 7.50 ಲಕ್ಷ ನಗದು ಚಿನ್ನಾಭರಣ ಪಡೆದು ಪರಾರಿ ಪ್ರಕರಣ ದಾಖಲು

The Karnataka Today

ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ಡಿಸೆಂಬರ್ 23ರಂದು ಸ್ವಉದ್ಯೋಗ ತರಬೇತಿ ಯೋಜನಾ ಕಾರ್ಯಗಾರ

The Karnataka Today

Leave a Comment