ಭಾರತ ಸಿಂಧೂ ಜಲ ಒಪ್ಪಂದವನ್ನು ಉಲ್ಲಂಘಿಸಿ ಯಾವುದೇ ಡ್ಯಾಮ್ ನಿರ್ಮಿಸಿದರೆ ಇಸ್ಲಾಮಾಬಾದ್  “ಧ್ವಂಸಗೊಳಿಸಲಿದೆ :: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

41

“ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಭಾರತ – ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವುದರ ನಡುವೆ, ಭಾರತ ಸಿಂಧೂ ಜಲ ಒಪ್ಪಂದವನ್ನು ಉಲ್ಲಂಘಿಸಿ ಯಾವುದೇ ಡ್ಯಾಮ್ ನಿರ್ಮಿಸಿದರೆ ಇಸ್ಲಾಮಾಬಾದ್ ಅದನ್ನು “ಧ್ವಂಸಗೊಳಿಸಲಿದೆ” ಎಂದು ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ ಶುಕ್ರವಾರ ಹೇಳಿದ್ದಾರೆ.

ಜಿಯೋ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಆಸಿಫ್, ಸಿಂಧೂ ನದಿಗೆ ಅಡ್ಡವಾಗಿ ಯಾವುದೇ ಮೂಲಸೌಕರ್ಯ ನಿರ್ಮಿಸುವುದನ್ನು “ಭಾರತದ ಆಕ್ರಮಣ” ಎಂದು ಪರಿಗಣಿಸಲಾಗುತ್ತದೆ ಎಂದಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿ ಬಳಿಕ ಪಾಕಿಸ್ತಾನ ವಿರುದ್ಧ ಭಾರತ ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದು, ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ.

ಸಿಂಧೂ ನದಿಗೆ ಅಡ್ಡವಾಗಿ ಡ್ಯಾಂ ನಿರ್ಮಿಸಲು ಭಾರತ ಯತ್ನಿಸಿದರೆ ಬಲವಾದ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು ಆಸಿಫ್ ಒತ್ತಿ ಹೇಳಿದ್ದಾರೆ. “ಖಂಡಿತ, ಅವರು ಯಾವುದೇ ರಚನೆಯನ್ನು ನಿರ್ಮಿಸಲು ಪ್ರಯತ್ನಿಸಿದರೆ, ನಾವು ಅದನ್ನು ಧ್ವಂಸಗೊಳಿಸುತ್ತೇವೆ

. ಆಕ್ರಮಣವು ಕೇವಲ ಫಿರಂಗಿ ಅಥವಾ ಗುಂಡುಗಳನ್ನು ಹಾರಿಸುವುದರ ಮೂಲಕ ಅಲ್ಲ; ಅದಕ್ಕೆ ಹಲವು ಮುಖಗಳಿವೆ. ಆ ಮುಖಗಳಲ್ಲಿ ಸಿಂಧೂ ನದಿ ನೀರನ್ನು ತಡೆಯುವುದು ಅಥವಾ ತಿರುಗಿಸುವುದು ಒಂದು.

ಇದರಿಂದ ಪಾಕಿಸ್ತಾನದಲ್ಲಿ ಹಸಿವು ಮತ್ತು ಬಾಯಾರಿಕೆಯಿಂದ ಜನರ ಸಾವುಗಳಿಗೆ ಕಾರಣವಾಗಬಹುದು” ಎಂದಿದ್ದಾರೆ. ಆದಾಗ್ಯೂ, ಸದ್ಯಕ್ಕೆ ಪಾಕಿಸ್ತಾನವು ಸೂಕ್ತ ವೇದಿಕೆಗಳಲ್ಲಿ ಮತ್ತು ಸಂಬಂಧಿತ ಪಾಲುದಾರರೊಂದಿಗೆ ಸಿಂಧೂ ನದಿ ಒಪ್ಪಂದದ ವಿಷಯವನ್ನು ಪ್ರಸ್ತಾಪಿಸುತ್ತದೆ ಎಂದು ಆಸಿಫ್ ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಮಾಜಿ ಪ್ರಧಾನಮಂತ್ರಿ ಖಾಲೇದಾ ಜಿಯಾ ಪುತ್ರ ತಾರಿಕ್ ರೆಹಮಾನ್ ನೇತೃತ್ವದ ಬಿಎನ್ ಪಿ ಪಕ್ಷ ಕ್ಕೆ ಬಹುಮತ ಪ್ರಧಾನಿ ಮೋದಿ ಅಭಿನಂದನೆ

ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಐತಿಹಾಸಿಕ ಗೆಲುವು ಸಾಧಿಸಿದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯನ್ನು...

ಬಲೂಚಿಸ್ತಾನದಲ್ಲಿ ಅಶಾಂತಿ ಪ್ರಯತ್ನಗಳಲ್ಲಿ ಭಾರತ ಭಾಗಿ ಎಂಬ ಪಾಕಿಸ್ತಾನದ ಆರೋಪ ಸ್ಪಷ್ಟವಾಗಿ ತಿರಸ್ಕರಿಸಿದ ಭಾರತ

ಬಲೂಚಿಸ್ತಾನದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನಗಳಲ್ಲಿ ಭಾರತದ ಭಾಗಿಯಾಗಿದೆ ಎಂಬ ಪಾಕಿಸ್ತಾನದ ಆರೋಪಗಳನ್ನು ಭಾರತ ಸ್ಪಷ್ಟವಾಗಿ ತಿರಸ್ಕರಿಸಿದೆ....

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂದುಗಳ ವಿರುದ್ಧ ದೌರ್ಜನ್ಯ ಹಿಂದು ಯುವಕನ ಕೊಲೆ

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಹಿಂದುಗಳ ಕೊಲೆ ನಡೆಯುತ್ತಿದೆ. ನಿನ್ನೆಯೂ ಸಹ ಹಿಂದೂ ಯುವಕನನ್ನು ಕೊಲ್ಲಲಾಗಿದೆ. ಶುಕ್ರವಾರ...

ಅಮೇರಿಕಾ ನಾಯಕರ ಹತ್ಯೆಗೆ ಸಂಚು ರೂಪಿಸಿದರೆ ಇರಾನ್ ‘ಈ ಭೂಮಿ ಮೇಲಿಂದ ನಾಶವಾಗುತ್ತದೆ’: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಇರಾನ್ ಅಮೆರಿಕದ ನಾಯಕನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾದರೆ, ಇರಾನ್ ನ್ನು ಈ ಭೂಮಿಯಿಂದಲೇ ಅಳಿಸಿಹಾಕಲಾಗುವುದು...